Monday, September 25, 2017

ಪ್ರಜಾವಾಣಿ > ಪುರವಣಿ > ಮುಕ್ತಛಂದ, 3 Sep, 2017

‘ಇದು ವಿಜ್ಞಾನದ ಬಾಗಿಲನ್ನು ಜನಸಾಮಾನ್ಯರಿಗೂ ತೆರೆಯುವ ಹೊತ್ತು’

Thursday, September 14, 2017

Tuesday, September 5, 2017

ವಿಜ್ಞಾನದ ಹೆದ್ದಾರಿಯಲ್ಲಿ ಮಹಾತಿರುವುಗಳು

http://www.navakarnatakaonline.com/vijnanada-heddariyalli-mahatiruvugalu

ವಿಜ್ಞಾನದ ವಿವಿಧ ಕ್ಷೇತ್ರಗಳ ಚಾರಿತ್ರಿಕ ಬೆಳವಣಿಗೆಯ ಹಾಗೂ ಆ ಹಾದಿಯಲ್ಲಿ ಅದು ಪಡೆದುಕೊಂಡ ಮಹಾತಿರುವುಗಳ ದಾಖಲೆಯಾದ ‘ವಿಜ್ಞಾನದ ಹೆದ್ದಾರಿಯಲ್ಲಿ ಮಹಾತಿರುವುಗಳು’ ಎಂಬ ವಿಶಿಷ್ಟ ಕೃತಿ ಇಂದು ಲೋಕಾರ್ಪಣೆಯಾಗುತ್ತಿದೆ.
ಭೌತ ವಿಜ್ಞಾನ, ಖಭೌತ ವಿಜ್ಞಾನ, ಅಂತರಿಕ್ಷ ವಿಜ್ಞಾನ, ರಸಾಯನ ವಿಜ್ಞಾನ, ಸಸ್ಯ ವಿಜ್ಞಾನ, ಪ್ರಾಣಿ ವಿಜ್ಞಾನ, ವೈದ್ಯ ವಿಜ್ಞಾನ, ಔಷಧಿ ವಿಜ್ಞಾನ, ವಿಧಿ ವಿಜ್ಞಾನ, ಕೃಷಿ ವಿಜ್ಞಾನ, ಭೂವಿಜ್ಞಾನ, ಪರಿಸರ ವಿಜ್ಞಾನ, ಗಣಿತ, ಎಂಜಿನಿಯರಿಂಗ್ ತಂತ್ರಜ್ಞಾನ, ದೂರಸಂಪರ್ಕ ಹಾಗೂ ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳ ಕುರಿತು ಒಟ್ಟು 35 ಲೇಖನಗಳಿರುವ ಈ ಕೃತಿಯ ಸಂಪಾದಕರು ಡಾ. ಟಿ. ಆರ್. ಅನಂತರಾಮು. ಡಾ. ನಾ. ಸೋಮೇಶ್ವರ, ಶ್ರೀ ನಾಗೇಶ ಹೆಗಡೆ, ಪ್ರೊ. ಎಂ. ಆರ್. ನಾಗರಾಜು, ಡಾ. ಎಚ್. ಆರ್. ಕೃಷ್ಣಮೂರ್ತಿ, ಡಾ. ಬಿ. ಎಸ್. ಶೈಲಜಾ, ಡಾ. ಪಾಲಹಳ್ಳಿ ವಿಶ್ವನಾಥ್ ಸೇರಿದಂತೆ ಹಲವು ಕ್ಷೇತ್ರಗಳ ಒಟ್ಟು 25 ವಿಷಯ ಪರಿಣತರು - ವಿಜ್ಞಾನ ಬರಹಗಾರರು ನವಕರ್ನಾಟಕ ಪ್ರಕಾಶನ ಪ್ರಕಟಿಸುತ್ತಿರುವ ಈ ಕೃತಿಯ ಲೇಖಕರ ಸಾಲಿನಲ್ಲಿದ್ದಾರೆ.
ಸಮಾಜದ ಮೇಲೆ ಅತ್ಯಂತ ಪ್ರಭಾವ ಬೀರಿರುವ ಅಪೂರ್ವ ಸಂಶೋಧನೆಗಳ ಮತ್ತು ಅನ್ವೇಷಣೆಗಳ ಸರಳ ನಿರೂಪಣೆ ನೀಡುವ 568 ಪುಟಗಳ ಈ ಕೃತಿಯಲ್ಲಿ ಒಟ್ಟು 835 ಚಿತ್ರಗಳೂ, ಆರ್ಟ್ ಕಾಗದದಲ್ಲಿ ಮುದ್ರಣವಾಗಿರುವ 108 ಬಹುವರ್ಣದ ಪುಟಗಳೂ ಇವೆ. 1/4 ಕ್ರೌನ್ ಗಾತ್ರದಲ್ಲಿ ಮುದ್ರಣವಾಗಿರುವ ₹ 800 ಮುಖಬೆಲೆಯ ಈ ಪುಸ್ತಕವನ್ನು ಇಂದು ಬೆಳಿಗ್ಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇಸ್ರೋ ಅಧ್ಯಕ್ಷ ಡಾ. ಎ. ಎಸ್. ಕಿರಣ್‌ಕುಮಾರ್ ಲೋಕಾರ್ಪಣೆಗೊಳಿಸಲಿದ್ದಾರೆ. ಕತೆಗಾರ ಶ್ರೀ ವಸುಧೇಂದ್ರ ಪುಸ್ತಕದ ಪರಿಚಯ ಮಾಡಿಕೊಡುತ್ತಾರೆ.

Friday, July 14, 2017

ಹೊನ್ನ ಕಣಜ ಸಂಪುಟ 1 : ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆಯಲ್ಲಿ ಬಹುಮಾನ ಪಡೆದ ಸಣ್ಣಕಥೆಗಳ ಸಂಕಲನ

ಹೊನ್ನ ಕಣಜ
ಹೊಸಗನ್ನಡ ಸಾಹಿತ್ಯದ ಸಣ್ಣಕಥೆಗಳ ಪರಂಪರೆಗೆ `ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆ' ನೀಡಿರುವ ಕೊಡುಗೆ ಅಸಾಧಾರಣ. ದೀಪಾವಳಿ ವಿಶೇಷಾಂಕಕ್ಕೂ ಕನ್ನಡದ ಸಣ್ಣಕಥೆಗಳಿಗೂ ಕರುಳುಬಳ್ಳಿಯ ಸಂಬಂಧವಿದೆ ಅನ್ನಿಸುವಂತೆ ಪ್ರಮುಖ ಕಥೆಗಾರರ ಅನನ್ಯ ಕಥೆಗಳು ವಿಶೇಷಾಂಕಗಳ ಒಡಲಲ್ಲಿ ಅರಳಿವೆ. ದೀಪಾವಳಿ ಕಥಾಸ್ಪರ್ಧೆಗೆ ಅರವತ್ತು ವರ್ಷಗಳು ತುಂಬಿದ ಈ ಸಂದರ್ಭದಲ್ಲಿ, ಕಥಾಸ್ಪರ್ಧೆಯಲ್ಲಿ ಬಹುಮಾನ ಪಡೆದ ಕಥೆಗಳನ್ನು ಮೂರು ಸಂಪುಟಗಳಲ್ಲಿ ಸಂಕಲನ ಮಾಡಿ ಕನ್ನಡ ಓದುಗರ ಕೈಗಿಡುವುದು "ಪ್ರಜಾವಾಣಿ ಪ್ರಕಾಶನ" ದ ಮತ್ತು ಪ್ರಜಾವಾಣಿಯ ಸಂಪಾದಕರಾದ ಕೆ. ಎನ್. ಶಾಂತ ಕುಮಾರ್ ಅವರ ಕನಸಿನ ಯೋಜನೆ. ಸಣ್ಣಕಥೆಗಳ ಈ "ಹೊನ್ನ ಕಣಜ"ದ ಪ್ರಥಮ ಸಂಪುಟ ಪ್ರಕಟವಾಗಿದೆ.
ಪ್ರಜಾವಾಣಿ ದೀಪಾವಳಿ ವಿಶೇಷಾಂಕದ ಈ ಕಥನ ಕಾಲ, ಕಾಲದ ಕಥನವೂ ಆಗಿದೆ ಎಂದರೆ ಅತಿಶಯೋಕ್ತಿ ಅಲ್ಲ. ವಸ್ತು ಮತ್ತು ವಿನ್ಯಾಸದಲ್ಲಿ ಅದು ಕಾಲದ ಜೊತೆ ಹೆಜ್ಜೆ ಹಾಕಿದೆ. ಹೊಸಗನ್ನಡ ಸಾಹಿತ್ಯದ ಎಲ್ಲ ಚಳುವಳಿಗಳ ಆಶಯಗಳು ಇಲ್ಲಿ ಅಭಿವ್ಯಕ್ತಿ ಪಡೆದಿವೆ. ನೂರಾರು ಪ್ರತಿಭಾವಂತರು ಈ ಕಥಾಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನ ಪಡೆದಿದ್ದಾರೆ. ಅತ್ಯುತ್ತಮ ಸಾಹಿತಿಗಳು ತೀರ್ಪುಗಾರರಾಗಿ ಪಾಲ್ಗೊಂಡಿದ್ದಾರೆ. ಕನ್ನಡ ನಾಡಿನ ಸಮಸ್ತ ಸೃಜನಶೀಲ ಬರಹಗಾರರನ್ನು ಒಳಗೊಳ್ಳುವ ವಾರ್ಷಿಕ ಸಾಹಿತ್ಯ ಕೈಂಕರ್ಯವಾಗಿ ಪ್ರಜಾವಾಣಿ ದೀಪಾವಳಿ ಕಥಾಸ್ಪರ್ಧೆ ಮುಂದುವರೆಯುತ್ತಿದೆ. ಅದರ ಅದ್ಭುತ ಬಹುಮಾನಿತ ಕಥೆಗಳು "ಹೊನ್ನ ಕಣಜ" ಸಂಪುಟಗಳಲ್ಲಿ ಸೇರಲಿವೆ.
"ಹೊನ್ನ ಕಣಜ" ದ ಪ್ರಥಮ ಸಂಪುಟಕ್ಕೆ ಪ್ರಖ್ಯಾತ ಕಲಾವಿದ ಗುರುದಾಸ್ ಶೆಣೈ ಅವರ ಕಲಾಕೃತಿಯ ಮುಖಪುಟವಿದೆ. ಒಟ್ಟು ೫೦ ಕಥೆಗಳಿರುವ ಡೆಮಿ ೧/೮ ಆಕಾರದ ಪುಸ್ತಕದಲ್ಲಿ ೪೯೦ ಪುಟಗಳಿವೆ. ಬೆಲೆ ರೂ. ೪೦೦. ಇದರ ವಿತರಕರಾದ ನವಕರ್ನಾಟಕದ ಎಲ್ಲ ಪುಸ್ತಕ ಮಳಿಗೆಗಳಲ್ಲಿ, ಎಲ್ಲ ನಗರಗಳ ಪ್ರಮುಖ ಪುಸ್ತಕದ ಅಂಗಡಿಗಳಲ್ಲಿ "ಹೊನ್ನ ಕಣಜ" ದ ಪ್ರಥಮ ಸಂಪುಟ ಲಭ್ಯವಿದೆ. ನವಕರ್ನಾಟಕದ ಆನ್ ಲೈನ್ ಸೇವೆಯಲ್ಲೂ ಇದನ್ನು ಖರೀದಿಸಬಹುದು.
"ಪ್ರಜಾವಾಣಿ ಪ್ರಕಾಶನ" ಇದುವರೆಗೆ ಸ್ಕೂಪ್ (ಕುಲದೀಪ್ ನಯ್ಯರ್), ವಚನ ಸಾಹಿತ್ಯ ಸಂವಾದ, ಜಾತಿ ಸಂವಾದ, ಸಮಾನತೆ ಕನಸನ್ನು ಮತ್ತೆ ಕಾಣುತ್ತ... (ಅತಿಥಿ ಸಂಪಾದಕ: ದೇವನೂರು ಮಹಾದೇವ, ತೃತೀಯ ಮುದ್ರಣ), ನಾರೀಕೇಳಾ (ಎಂ. ಎಸ್. ಆಶಾದೇವಿ) ಮತ್ತು ಅಂಕುರ (ಡಾ. ಎಸ್. ಎಸ್. ವಾಸನ್) ಪುಸ್ತಕಗಳನ್ನು ಪ್ರಕಟಿಸಿದೆ.
http://www.navakarnatakaonline.com/honna-kanaja-vol-1

http://www.navakarnatakaonline.com/honna-kanaja-vol-1

Tuesday, June 27, 2017

15 ಶೈಕ್ಷಣಿಕ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮ

ಪ್ರಿಯ ಓದುಗರೆ,
2017ರ ಜುಲೈ 01ರ ಶನಿವಾರ ಬೆಳಗ್ಗೆ 10.30 ಕ್ಕೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ 15 ಶೈಕ್ಷಣಿಕ ಕೃತಿಗಳ ಲೋಕಾರ್ಪಣೆ ಕಾರ್ಯಕ್ರಮವಿದೆ. ಶ್ರೀ ಟಿ. ಎಂ. ಕುಮಾರ್ ಅವರಿಂದ ಅಧ್ಯಕ್ಷತೆ ಮತ್ತು ಲೋಕಾರ್ಪಣೆ. ದಯವಿಟ್ಟು ಈ ಸಮಾರಂಭದಲ್ಲಿ ಭಾಗವಹಿಸಿ. ಇದನ್ನು ನಿಮ್ಮ ಗೆಳೆಯರಿಗೂ ಕಳಿಸಿ ಅವರನ್ನೂ ಕರೆತನ್ನಿ.
ವಂದನೆಗಳು.
ಎ . ಆರ್ . ಉಡುಪ
http://www.navakarnatakaonline.com/

http://www.navakarnatakaonline.com/